-ಅಭಿ ತೀರ್ಥಹಳ್ಳಿ Abhi Thirthahalli “ಕರ್ವಾಲೊ Karvalo”, ಪೂರ್ಣಚಂದ್ರ ತೇಜಸ್ವಿ Purnachandra Tejaswi ಯವರ ಕೇವಲ ಒಂದು ರೋಚಕ ಕಾದಂಬರಿಯಲ್ಲ, ಬದಲಾಗಿ ಮಲೆನಾಡಿನ ಸಾಮಾಜಿಕ, ಪಾರಿಸರಿಕ ಹಾಗೂ ಸಾಂಸ್ಕೃತಿಕ ಪಲ್ಲಟಗಳನ್ನು ಅತ್ಯಂತ ಸೂಕ್ಷ್ಮವಾಗಿ ಕಟ್ಟಿಕೊಡುವ ಒಂದು ಮಹತ್ವದ ಕೃತಿ. ತೇಜಸ್ವಿಯವರ ಕೃತಿಗಳಲ್ಲಿ ನಾನು ಮೊದಲು ಓದಿದ ಹಾಗೂ ನನ್ನನ್ನು ಅತಿ ಹೆಚ್ಚು ಕಾಡಿದ ಪುಸ್ತಕವಿದು. ಇದನ್ನು ನಾನು ಐದು ಬಾರಿ ಓದಿರುವೆ. ಪ್ರತಿ ಬಾರಿಯೂ ಕೃತಿಯು ಹೊಸದೊಂದು ದೃಷ್ಟಿಕೋನವನ್ನು ತೆರೆದಿಡುತ್ತಲೇ ಹೋಗುತ್ತದೆ. ಕೇವಲ ಮಲೆನಾಡನ್ನು ರಮ್ಯವಾಗಿ, ಆದರ್ಶಮಯವಾಗಿ […]
